Home > Event > Health Awarness Programme on Disability
Loading Events

« All Events

  • This event has passed.

Health Awarness Programme on Disability

April 16, 2021 @ 3:00 pm - 5:00 pm

ತಲ್ಲೂರು ಫ್ಯಾಮಿಲಿ ಟ್ರಸ್ಟ್ ಪ್ರಾಯೋಜಿತ  ನಾರಾಯಣ ವಿಶೇಷ ಶಾಲೆಯ   ಮಕ್ಕಳ ಷೋಷಕರಿಗಾಗಿ ವಿಶೇಷ ಮಾಹಿತಿ ಅರಿವು  ಕಾರ್ಯಕ್ರಮವನ್ನು ಪಾಲಕರ ಸಭೆಯಲ್ಲಿ ದಿನಾಂಕ16.04.2021 ರಂದು ಮಧ್ಯಾಹ್ನ 3.00ಕ್ಕೆ ನಡೆಸಲಾಯಿತು.
ಈ ಕಾರ್ಯಕ್ರಮದಲ್ಲಿ ಡಾ. ಪಿ.ವಿ.ಭಂಡಾರಿ, ವೈದ್ಯಕೀಯ ನಿರ್ದೇಶಕರು,ಡಾ ಎ.ವಿ  ಬಾಳಿಗ ಆಸ್ಪತ್ರೆ ದೂಡ್ಡಣಗುಡ್ಡೆ ಇವರು  ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದಲ್ಲಿ  ಪ್ರಮುಖವಾಗಿ ಅಂಗವಿಕಲತೆ ಮತ್ತು ಅದರ ವಿಧಗಳು, ಬುದ್ಧಿಮಾಂಧ್ಯತೆ ಎಂದರೇನು ಮತ್ತು ಅದಕ್ಕೆ ಕಾರಣಗಳು ಹಾಗೂ ವಿಶೇಷ ಮಕ್ಕಳ ಪಾಲನೆ ಮಾಡುವಲ್ಲಿ ಪೋಷಕರಲ್ಲಿ ಇರಬೇಕಾದ ಕೌಶಲ್ಯಗಳೂಂದಿಗೆ  ವಿಕಲತೆಯನ್ನು ಶೀಘ್ರ ಗುರುತಿಸುವಿಕೆ ಮತ್ತು ಪರಿಹಾರ ಕಂಡುಕೊಳ್ಳುವಿಕೆ ಮತ್ತು ವಿಶೇಷವಾಗಿ ಆಟಿಸಂನ ಕುರಿತು  ಮಾಹಿತಿಯನ್ನು ನೀಡಿದರು. ಅಲ್ಲದೇ ಪೋಷಕರ ವಿವಿಧ ಪ್ರಶ್ನೆಗಳಿಗೆ ಸೂಕ್ತವಾದ ಉತ್ತರವನ್ನು ನೀಡಿದರು.
ಈ ಕಾರ್ಯಕ್ರಮದಲ್ಲಿ  ಸಂಸ್ಥೆಯ ಹಿತೈಷಿಗಳಾದ  ಹಟ್ಟಿಯಂಗಡಿ ಸಿದ್ದಿವಿನಾಯಕ ದೇವಸ್ಥಾನದ ಪ್ರಮುಖ ಅರ್ಚಕರಾದ ಶ್ರೀ ಬಾಲಚಂದ್ರ ಭಟ್ ರವರು ಸಂಸ್ಥೆಯ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿದರು. ಇನ್ನೋರ್ವ ಅತಿಥಿ ಪ್ಲಸಂಟ್ ಕುಂದಾಪುರ ಇದರ ಮಾಲಕರಾದ ಅಬ್ದುಲ್ ಬಶೀರ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸುರೇಶ್ ತಲ್ಲೂರು ಸ್ವಾಗತಿಸಿದರು, ಟ್ರಸ್ಟೀ ವಸಂತ ಶಾನುಭಾಗರವರು ವಂದಿಸಿದರು. ಮುಖ್ಯ ಶಿಕ್ಷಕಿ ಪ್ರೇಮಾರವರು ಕಾರ್ಯಕ್ರಮ ನಿರೂಪಿಸಿದರು.
       

Details

Date:
April 16, 2021
Time:
3:00 pm - 5:00 pm